• Police Varthe
Sunday, January 25, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ದಿಗಂತ್‌ನನ್ನು ಯಾರೂ ಹೊತ್ತುಕೊಂಡು ಹೋಗಿರಲಿಲ್ಲ…! ಬಸ್ಸು, ರೈಲಿನಲ್ಲೇ ಸುತ್ತಾಡಿಕೊಂಡಿದ್ದ ಅತಿಬುದ್ಧಿವಂತ ಬಾಲಕ ಸಿಕ್ಕಿದ್ದಾದರೂ ಹೇಗೆ?ನಾಪತ್ತೆಯಾದ ಬಾಲಕ ಪತ್ತೆಯಾದ ರೋಚಕ ಕಥೆ ಇಲ್ಲಿದೆ!

Ranjith Madanthyar by Ranjith Madanthyar
March 8, 2025
in Blog, ಕ್ರೈಂ ನ್ಯೂಸ್, ಪಿವಿ ವಿಶೇಷ, ಪೊಲೀಸ್ ನ್ಯೂಸ್, ರಾಜ್ಯ
0
ದಿಗಂತ್‌ನನ್ನು ಯಾರೂ ಹೊತ್ತುಕೊಂಡು ಹೋಗಿರಲಿಲ್ಲ…! ಬಸ್ಸು, ರೈಲಿನಲ್ಲೇ  ಸುತ್ತಾಡಿಕೊಂಡಿದ್ದ ಅತಿಬುದ್ಧಿವಂತ ಬಾಲಕ ಸಿಕ್ಕಿದ್ದಾದರೂ ಹೇಗೆ?ನಾಪತ್ತೆಯಾದ ಬಾಲಕ ಪತ್ತೆಯಾದ ರೋಚಕ ಕಥೆ ಇಲ್ಲಿದೆ!

{"remix_data":[],"remix_entry_point":"challenges","source_tags":["picsart"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":[],"tools_used":{"transform":1},"is_sticker":false,"edited_since_last_sticker_save":true,"containsFTESticker":false}

0
SHARES
8.6k
VIEWS
WhatsappTelegramShare on FacebookShare on Twitter

ಮಂಗಳೂರು: ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಎಳೆ ಪ್ರಾಯದ ಹುಡುಗ ದಿಗಂತ್ ಹಲವು ದಿನಗಳಿಂದ ನಾಪತ್ತೆಯಾಗಿ ಇದೀಗ ದಿಢೀರ್ ಪತ್ತೆಯಾಗಿದ್ದಾನೆ…!  ಹಲವು ಪ್ರಶ್ನೆಗಳನ್ನು ಹುಟ್ಟಿಸಿ ಎಲ್ಲರಿಗೂ ಪ್ರಶ್ನಾರ್ಥಕವಾಗಿ ಕಾಡಿದ್ದ ಈ ಹುಡುಗ ಇಷ್ಟು ದಿನಗಳ ಕಾಲ ಎಲ್ಲಿದ್ದ, ಏನು‌‌ ಮಾಡ್ತಾ ಇದ್ದ, ಅಷ್ಟಕ್ಕೂ ಅವನು ನಾಪತ್ತೆಯಾಗಿದ್ದಾದರೂ ಯಾಕೆ, ಪತ್ತೆಯಾಗಿದ್ದಾದರೂ ಹೇಗೆ ಎಂಬೆಲ್ಲಾ ನೂರಾರು ಪ್ರಶ್ನೆಗಳಿವೆ.

ಬಾಲಿವುಡ್ ಚಿತ್ರದಂತೆ ಅತಿ ಕುತೂಹಲ ಮೂಡಿಸಿದ್ದ ಬಾಲಕ ದಿಗಂತ್‌ನ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ದಿಗಂತ್‌ನದ್ದು ಒಂದು ಕೂಡು ಕುಟುಂಬ.  ಅವನು ತುಂಬಾ ಬುದ್ಧಿವಂತ ಹುಡುಗನಾಗಿದ್ದು,  ಕ್ಲಾಸ್‌ ನಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಿದ್ದ ಎಂದು ತಿಳಿದುಬಂದಿದೆ.  ಕೂಡು ಕುಟುಂಬವಾಗಿರುವುದರಿಂದ ದಿಗಂತ್ ಬಗ್ಗೆ ಅವನ ಪೋಷಕರು ಅಷ್ಟೊಂದು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ ಎನ್ನಲಾಗಿದೆ. ಉತ್ತಮ ಅಂಕಗಳನ್ನು ಗಳಿಸಿ ಕ್ಲಾಸಿನಲ್ಲಿ ಹೆಸರು ಪಡೆದಿದ್ದ ಹುಡುಗ ದಿಗಂತ್ ಇದ್ದಕ್ಕಿದ್ದಂತೆ ವಿದ್ಯೆಯಲ್ಲಿ ಆಸಕ್ತಿ ಕಳೆದುಕೊಂಡಿದ್ದು, ತನ್ನ ಪಾಡಿಗೆ  ತಾನು ಇರುತ್ತಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಮೊಬೈಲ್ ಅಡಿಕ್ಟ್ ಆಗಿದ್ದ ದಿಗಂತ್ ಹೆತ್ತವರಿಂದಲೂ ಬೈಯ್ಸಿಕೊಂಡಿದ್ದ ಎನ್ನಲಾಗಿದೆ.‌ ಮಾನಸಿಕವಾಗಿ  ಜರ್ಜರಿತವಾಗಿದ್ದ ಹುಡುಗ ಪರಿಹಾರ ಕಾಣಲೆಂದು ಮನೆಯಿಂದ ದೂರವಾಗಿ ಎಲ್ಲಾದರೂ ನೆಲೆ ಕಾಣಬೇಕೆಂದು ಯೋಚಿಸಿ ಮನೆ ಬಿಟ್ಟು ನಾಪತ್ತೆಯಾದನೆಂದು ಮೂಲಗಳಿಂದ ಮಾಹಿತಿ ಲಭಿಸಿದೆ.

ಮನೆಯಿಂದ ಹೊರಬಂದ ದಿಗಂತ್ ರೈಲ್ವೆ ಹಳಿಗೆ ಬಂದಿದ್ದ ಎನ್ನಲಾಗಿದೆ. ನಡೆದಾಡುವಾಗ ಅವನ ಕಾಲಿಗೆ ಗಾಯವಾಗಿದ್ದು ಮುಂದೆ ಚಪ್ಪಲಿ ಹಾಕಿ ನಡೆಯಲಾಗದೆ ಒದ್ದಾಡುತ್ತಿದ್ದ. ಹೀಗಾಗಿ ತನ್ನ ಚಪ್ಪಲಿಯನ್ನು ಅಲ್ಲೇ ಬಿಟ್ಟು ಖಾಲಿ ಕಾಲ್ನಡಿಗೆಯಲ್ಲಿ ಸಂಚರಿಸಿದ ಎನ್ನಲಾಗಿದೆ.

ಇದೇ ರಕ್ತ ಮಿಶ್ರಿತ ಚಪ್ಪಲಿ ಊರವರಿಗೆ ಪತ್ತೆಯಾಗಿದ್ದು, ದಿಗಂತ್ ನಾಪತ್ತೆ ಹಿಂದೆ ನಿಗೂಢ ಸಂಶ‌ಯಗಳು ಹುಟ್ಟಲು ಕಾರಣವಾಗಿದೆ. ಅಲ್ಲದೆ ಹಿಂದೂ ಸಂಘಟನೆಗಳು ಕೂಡಾ ಪ್ರತಿಭಟನೆ ನಡೆಸಿದವು. ದಿಗಂತ್ ಪತ್ತೆಗಾಗಿ ಪೊಲೀಸರಲ್ಲಿ ಒತ್ತಡ ಹೇರಲಾಗುತ್ತಿತ್ತು. ಇದೆಲ್ಲದರ ಮಧ್ಯೆ ಹೀಗೆ ರೈಲ್ವೆ ಟ್ರ್ಯಾಕ್‌ ಮೂಲಕ ಸಾಗಿಬಂದ ಹುಡುಗ ದಿಗಂತ್ ನೇರವಾಗಿ ರಾಷ್ಟ್ರೀಯ ಹೆದ್ದಾರಿಯ ಹತ್ತಿರದಲ್ಲಿ ಇರುವ ಮದುವೆ ಹಾಲ್‌ ಒಂದರ ಬಳಿಯಿಂದ ರಸ್ತೆಯಲ್ಲಿ ‌ಸಾಗುತ್ತಿದ್ದ ಬೈಕ್ ಒಂದರಲ್ಲಿ ಮಂಗಳೂರಿನ ಸ್ಟೇಟ್ ಬ್ಯಾಂಕ್‌  ತಲುಪಿದ್ದ ಎನ್ನಲಾಗಿದೆ.

ಅಲ್ಲಿ ಏನು ಮಾಡಬೇಕೆಂದು ತಿಳಿಯದ ಬಾಲಕ ನೇರವಾಗಿ ಶಿವಮೊಗ್ಗ ಬಸ್ ಹತ್ತಿದ್ದು, ಅಲ್ಲಿಂದ ಮೈಸೂರಿಗೆ ತೆರಳಿದ್ದ. ಖರ್ಚಿಗೆ ಮನೆಯಿಂದ ಕೊಂಚ ಹಣ ತಂದಿದ್ದ ದಿಗಂತ್ ಮೈಸೂರಿನಲ್ಲಿ ಬಟ್ಟೆ ಖರೀದಿಸಿ ಮೈಸೂರು ಸುತ್ತಾಡಿ ‌ನಂತರ ಅಲ್ಲಿಂದ ನೇರವಾಗಿ ಬೆಂಗಳೂರಿಗೆ ರೈಲು ಹತ್ತಿ ಬೆಂಗಳೂರಿನ ಕೆಂಗೇರಿಯಲ್ಲಿ ಇಳಿದಿದ್ದಾನೆ.  ಅಲ್ಲಿ ಹಾಳುಮೂಳು ತಿಂಡಿ ತಿಂದು ಹಸಿವು ನೀಗಿಸಿದ್ದ. ನಂತರ ನದಿಬೆಟ್ಟ ಸುತ್ತಿದ, ಆದರೆ ಅವನಲ್ಲಿ ಹಣವೆಲ್ಲಾ ಮುಗಿದಿತ್ತು. ನಂತರ ಬೆಂಗಳೂರಿನಲ್ಲಿ  ದಿಗಂತ್ ಹಣ ಸಂಪಾದನೆಗಾಗಿ ರೆಸಾರ್ಟ್ ಒಂದಕ್ಕೆ ತೆರಳಿ ಕೆಲಸ ಕೊಡುವಂತೆ ಮನವಿ ಮಾಡಿದ್ದಾನೆ ಎನ್ನಲಾಗಿದೆ‌. ಅವರು ಕೆಲಸ ಕೊಟ್ಟಿದ್ದು, ಅಲ್ಲಿ ಸುಮಾರು ಎರಡು ದಿನ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.

ರೆಸಾರ್ಟ್‌ನವರಿಂದ ಸುಮಾರು 500 ರೂ. ಪಡೆದುಕೊಂಡಿದ್ದ ದಿಗಂತ್ ಮತ್ತೆ ಮೈಸೂರಿಗೆ ಬಸ್ ಹತ್ತಿದ್ದಾನೆ ಎನ್ನಲಾಗಿದೆ‌. ಇದ್ದ ಹಣದಲ್ಲಿ ಊಟ ಮಾಡಿ ಅಲ್ಲಿ ಏನು ಮಾಡುವುದೆಂದು ತಿಳಿಯದೆ ನೇರವಾಗಿ ಮತ್ತೆ  ಉಡುಪಿಗೆ ರೈಲು ಏರಿ ಬಂದಿದ್ದಾನೆ. ಈ ಮಧ್ಯೆ ರೈಲಿನಲ್ಲಿ ಬರುತ್ತಿರುವ ಸಮಯ ಈತ ನಾಪತ್ತೆಯಾದ‌ ಜಾಗದಲ್ಲಿ ಪೊಲೀಸರು ಹುಡುಕಾಟ ‌ನಡೆಸುತ್ತಿರುವುದನ್ನು ರೈಲಿನಲ್ಲಿ ಸಂಚರಿಸುವಾಗ ನೋಡಿಕೊಂಡೇ ಹೋಗಿದ್ದಾನೆ. ನಂತರ ಉಡುಪಿಯಲ್ಲಿ ಇಳಿದಿದ್ದಾನೆ ಎನ್ನಲಾಗಿದೆ. ಉಳಿದಿದ್ದ ಚಿಲ್ಲ‌ರೆ ಹಣದಲ್ಲಿ ಬಿಸ್ಕೆಟ್, ಚಾಕ್ಲೆಟ್, ನೀರಿನಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ  ಹುಡುಗನಿಗೆ ಹಣವೆಲ್ಲಾ ಮುಗಿದ ಮೇಲೆ ಏನು ಮಾಡಬೇಕೆ‌ಂದು ತಿಳಿಯದೆ ಕಂಗಾಲಾಗಿದ್ದ ಎನ್ನಲಾಗಿದೆ‌

ಮನೆಯಿಂದ ಹಾಕಿಕೊಂಡು ಬಂದಿದ್ದ ಡ್ರೆ‌ಸ್ ಮಾತ್ರವಲ್ಲದೇ ಈತ ಮೈಸೂರಿನಲ್ಲಿ ಖರೀದಿಸಿದ್ದ ಉಡುಗೆಯೂ ಹಳತಾಗಿದ್ದರಿಂದ ಹೊಸ ಬಟ್ಟೆ ಖರೀದಿಸಬೇಕೆಂದು ಚಿಂತಿಸಿದ್ದ ಎನ್ನಲಾಗಿದೆ. ಆದರೆ ಇವನ ಬಳಿ ಹಣ ಮುಗಿದಿದ್ದು ಅದಕ್ಕಾಗಿ ನೇರವಾಗಿ ಉಡುಪಿ ಯ ಡೀ ಮಾರ್ಟ್‌ ಗೆ ಬಂದಿದ್ದಾನೆ ಎನ್ನಲಾಗಿದೆ. ಡೀ ಮಾ‌ರ್ಟ್‌ನಲ್ಲಿ ಬಟ್ಟೆ ಖರೀದಿಸಿದ್ದ ಬಾಲಕನ ಬಳಿ ಪಾವತಿಸಲು ಹಣ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಅಲ್ಲಿಂದ ಓಡಿ ತಪ್ಪಿಸಲೆತ್ನಿಸಿದ ಹುಡುಗನನ್ನು ಗಮನಿಸಿದ ಡೀ ಮಾರ್ಟ್ ಸಿಬ್ಬಂದಿ ಹಿಡಿದಿಟ್ಟುಕೊಂಡರು ಎನ್ನಲಾಗಿದೆ.

ಹುಡುಗನ ಮೇಲೆ ಸಂಶಯ ಬಂದಿದ್ದ ಡೀ ಮಾರ್ಟ್ ಉದ್ಯೋಗಿಯೋರ್ವ, ದಕ್ಷಿಣ ಕನ್ನಡದಲ್ಲಿ ದಿಗಂತ್ ನಾಪತ್ತೆಯಾದ ಸುದ್ದಿಯನ್ನು ಮೊದಲೇ ಗ್ರಹಿಸಿದ್ದ ಎನ್ನಲಾಗಿದೆ. ಅಲ್ಲದೆ ಹುಡುಗನ ಮನೆಯವರ ಫೋನ್ ನಂಬರನ್ನೂ ಪಡೆದ ಸಿಬ್ಬಂದಿ ಮನೆಯವರಿಗೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ‌. ಮನೆ ಮಂದಿ ಬಂಟ್ವಾಳ ಪೊಲೀಸರಿಗೆ ಈ ಮಾಹಿತಿಯನ್ನು ನೀಡಿದ್ದಾರೆ. ಇದೆಲ್ಲಾ ಮಾಹಿತಿ ಪ್ರಕರಣದ ತನಿಖಾಧಿಕಾರಿಗಳ ತಂಡಕ್ಕೆ ಲಭ್ಯವಾಗಿದೆ. ತಕ್ಷಣವೇ ಉಡುಪಿ ಪೊಲೀಸರಿಗೆ ಮಾಹಿತಿ‌ ತಿಳಿಸಿ, ಉಡುಪಿ ಪೊಲೀಸರ ಸಹಾಯದಿಂದ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಇಷ್ಟೆಲ್ಲಾ ಮಾಹಿತಿ ಲಭ್ಯವಾಗುತ್ತಿದ್ದಂತೆ ಸಬ್ ಇನ್ಸ್ ಪೆಕ್ಟರ್‌ ನಂದಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ  ಜೊತೆ ನೇರವಾಗಿ ಉಡುಪಿಗೆ ತೆರಳಿದ್ದಾರೆ.

ಇದೀಗ ಹುಡುಗನನ್ನು ಮಂಗಳೂರಿಗೆ ಕರೆದು ತಂದ ನಂತರ, ಎಸ್ಪಿ ಯತೀಶ್ ಅವರು ಬಾಲಕನನ್ನು ಮಾತನಾಡಿಸಿ ಆತನನಿಗೆ ಆಹಾರದ ವ್ಯವಸ್ಥೆ ಮಾಡಿ‌ ನಂತರ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿ, ಕಾನೂನು ಮುಖಾಂತರ ಕ್ರಮ ಕೈಗೊಳ್ಳಲಾಗಿದ್ದು, ಇದೀಗ ಬೊಂದೆಲ್‌ನ ಬಾಲಕರ ಕೇಂದ್ರಕ್ಕೆ ಕಳಿಸಲಾಗಿದೆ ಎನ್ನಲಾಗಿದೆ.

ಹುಡುಗ ದಿಗಂತ್ ಅತಿ ಬುದ್ದಿವಂತನಾಗಿದ್ದು, ಮನೆ ಮಂದಿ ನಿರ್ಲಕ್ಷ್ಯ ವಹಿಸಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ. ಮೊಬೈಲ್ ಅಡಿಕ್ಟ್ ಆಗಿದ್ದ ಆತ ಇತ್ತೀಚೆಗೆ ಕಲಿಕೆಯ ಆಸಕ್ತಿಯನ್ನೂ ಕಳೆದುಕೊಂಡಿದ್ದ ಎನ್ನಲಾಗಿದೆ. ಇದರಿಂದ ಹೊರಬರಬೇಕೆಂದು ನಿರ್ಧರಿಸಿದ್ದ ದಿಗಂತ್ ಹೀಗೆ ಗೊತ್ತುಗುರಿ‌ ಇ‌ಲ್ಲದವನ ಹಾಗೆ ಸುತ್ತಾಡಿಕೊಂಡಿದ್ದ. ಕೊನೆಗೂ ದಕ್ಷಿಣ ಕನ್ನಡ ‌ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು‌ ಸಿಬ್ಬಂದಿಗಳು  ಅನೇಕ‌‌ ದಿನಗಳಿಂದ ನಡೆಸಿದ ಎಲ್ಲಾ ಪ್ರಯತ್ನಕ್ಕೂ ಕಡೆಗೂ ಫಲ ಸಿಕ್ಕಿದೆ.

Previous Post

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

Next Post

ಶಿಕ್ಷಕರಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.. ಇಬ್ಬರು ಶಿಕ್ಷಕರು ಅಮಾನತು

Related Posts

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ
ಕ್ರೈಂ ನ್ಯೂಸ್

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
Blog

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!
ಕ್ರೈಂ ನ್ಯೂಸ್

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
Blog

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026
ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Blog

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
Next Post
ಶಿಕ್ಷಕರಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.. ಇಬ್ಬರು ಶಿಕ್ಷಕರು ಅಮಾನತು

ಶಿಕ್ಷಕರಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.. ಇಬ್ಬರು ಶಿಕ್ಷಕರು ಅಮಾನತು

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

0
ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

0
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

0
ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026

Recent News

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.