ಪುತ್ತೂರು: ಪ್ರಾರ್ಥನೆ ಸಲ್ಲಿಸಿ ಮಸೀದಿಯಿಂದ ಹೊರ ಬರುತ್ತಿದ್ದ ಮೂವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
ಹೋಳಿ ಹಬ್ಬ ಆಚರಣೆ ಮಾಡುತ್ತಿದ್ದ ಬಂಗಾಳಿಗಳ ತಂಡ ಹಲ್ಲೆ ನಡೆಸಿದೆ. ಗಾಯಾಳುಗಳು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.