ತುಮಕೂರು: ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಖತರ್ನಾಕ್ ಕಳ್ಳರು ಲಕ್ಷಾಂತರ ರೂಪಾಯಿಯ ನಗ, ನಗದು ದೋಚಿದ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ. ದೊಡ್ಡಹಟ್ಟಿಯ ಮಂಜುನಾಥ್ ಎನ್ನುವವರ ಮನೆಗೆ ಮಧ್ಯಾಹ್ನದ ಸಮಯದಲ್ಲಿ ಬೀಗ ಮುರಿದು ನುಗ್ಗಿದ ಕಳ್ಳರು ಒಂದು ಲಕ್ಷ ರೂ. ನಗದು ಮತ್ತು ಚಿನ್ನಾಭರಣ ಕದ್ದೊಯ್ದಿದ್ದಾರೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಾಡುಹಗಲೇ ಕಳ್ಳರು ತಮ್ಮ ಕರಾಮತ್ತು ತೋರಿಸುತ್ತಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ ಎನ್ನುವುದು ಸುಳ್ಳಲ್ಲ.