ಮಂಗಳೂರು; ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ನನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ದ.ಕ ಎಸ್ಪಿ ಅವರು ತಿಳಿಸಿದ್ದಾರೆ
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್ 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21) ಎಂಬಾತನನ್ನು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು 4 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಅವರು ತಿಳಿಸಿದ್ದಾರೆ.